July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಯನಕ್ಕಾಗಿ 25 ಜನ ಸದಸ್ಯರ ಮೇಘಾಲಯ ರಾಜ್ಯದ ಸಹಕಾರಿ ಇಲಾಖೆಯ ಅಧಿಕಾರಿಗಳ ತಂಡವು ನ.28 ರಂದು ಬೇಟಿ ನೀಡಿತು.

ಈ ತಂಡದಲ್ಲಿ ಮೇಘಾಲಯ ರಾಜ್ಯದ ಸಹಕಾರಿ ಇಲಾಖೆಯ ಅಧಿಕಾರಿಗಳು ಇದ್ದರು.ತಂಡವು ಸಂಘದ ಕಿಲ್ಲೂರು ಹಾಗೂ ನಾವೂರು ಶಾಖೆಗೆ ಬೇಟಿಯನ್ನು ನೀಡಿತು.ಈ ಸಂದರ್ಭದಲ್ಲಿ ಸಂಘದ ಮುಖಾಂತರ ವಿತರಣೆಯಾಗುತ್ತಿರುವ ಸಾಲ ಯೋಜನೆಗಳು ಮತ್ತು ಸಂಘದ ಮುಖಾಂತರ ನಡೆಸುತ್ತಿರುವ ಮಾರಾಟ ವ್ಯವಹಾರಗಳ ಸಮಗ್ರವಾದ ಮಾಹಿತಿಯನ್ನು ಪಡೆದರು.ಹಾಗೂ ಕೇಂದ್ರ ಸರಕಾರ ಹಾಗೂ ನಬಾರ್ಡ್ ಯೋಜನೆಯಡಿಯಲ್ಲಿ ನಿರ್ಮಾಣವಾದ ಕಡಿರುದ್ಯಾವರ ಶಾಖೆಯ ವ್ಯವಹಾರದ ಮಾಹಿತಿಯನ್ನು ಪಡೆದರು.ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 1020.75 ಕೋಟಿ ವ್ಯವಹಾರವನ್ನು ನಡೆಸಿ. 5062 ಸದಸ್ಯರನ್ನು ಹೊಂದಿ,ರೂ 145 ಕೋಟಿಗೂ ಮಿಕ್ಕಿ ಸಾಲ ನೀಡಲಾಗಿದ್ದು, ಇದರಲ್ಲಿ 67.28 ಕೋಟಿಗೂ ಮಿಕ್ಕಿ ಕೃಷಿ ಸಾಲಗಳನ್ನು ವಿತರಿಸಲಾಗಿದೆ.2023-24 ನೇ ಸಾಲಿನಲ್ಲಿ 4.30 ಕೋಟಿ ಲಾಭಗಳಿಸಿದೆ.ಮತ್ತು 9.77 ಕೋಟಿ ಮಾರಾಟ ವ್ಯವಹಾರವನ್ನು ನಡೆಸಲಾಗಿದೆ.ಸಂಘವು ಪೂರ್ಣ ಪ್ರಮಾಣದ ಏಳು ಶಾಖೆಗಳನ್ನು ಹೊಂದಿದ್ದು, ಪತ್ತು ಮತ್ತು ಪತ್ತೇತರ ವ್ಯವಹಾರಗಳನ್ನು ನಡೆಸುತ್ತಿದೆ.ಈ ಎಲ್ಲಾ ವ್ಯವಹಾರಗಳ ಯಶಸ್ವಿ ಅನುಷ್ಟಾನದಿಂದ ನಬಾರ್ಡಿನ ಗಮನ ಸೆಳೆದಿದ್ದು, ಸಂಘದ ಯಶಸ್ವೀ ವ್ಯವಹಾರಕ್ಕೆ ಅಪೆಕ್ಸ್‌ ಬ್ಯಾಂಕಿನ ರಾಜ್ಯದ ಅತ್ಯುತ್ತಮ ಸಹಕಾರ ಸಂಘ ಮತ್ತು ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕಿನಿಂದ ಜಿಲ್ಲಾ ಮಟ್ಟದ ಉತ್ತಮ ಸಹಕಾರ ಸಂಘವೇಂಬ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ನಬಾರ್ಡ್ ಸಂಸ್ಥೆಯ ಡಿ.ಡಿ.ಎಮ್ ಸತೀಶನ್ ಕರ್ತಾ,ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶ್ರೀ ದಯಾನಂದ ಶೆಟ್ಟಿಗಾರ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಗೌಡ, ಶಾಖಾ ವ್ಯವಸ್ಥಾಪಕರುಗಳಾದ ಪ್ರಕಾಶ್ ಕುಮಾರ್, ರಮಾನಂದ.ಕೆ, ಚಂದ್ರಹಾಸ ಮತ್ತು ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya
error: Content is protected !!