September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

ಬಜಿರೆ: ಹೊಸಪಟ್ಣ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಇದರ ಆಶ್ರಯದಲ್ಲಿ ಕ್ಲಬ್‌ನ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳ ಸಹಾಯಾರ್ಥವಾಗಿ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಇದರ ಸಹಯೋಗದಲ್ಲಿ ಹೊನಲುಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ನ.30 ರಂದು ಹೊಸಪಟ್ಣ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ವಠಾರದಲ್ಲಿ ಸಂಜೆ ಗಂಟೆ 8 ಕ್ಕೆ ಜರಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಮ್ ವಹಿಸಲಿದ್ದಾರೆ. ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.


ಸಾಧಕರಿಗೆ ಸನ್ಮಾನ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ್ಚಂದ್ರ ಸಾಲ್ಯಾನ್ ಇರುವೈಲು ಪಾಣಿಲ, ಬೆಳ್ತಂಗಡಿ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮುಖ್ಯ ತೀರ್ಪುಗಾರ ಪ್ರಭಾಕರ ನಾರಾವಿ, ವೇಣೂರು ಮೆಸ್ಕಾಂ ಇಲಾಖೆಯ ಮುಸ್ತಾಫ, ವಿಸ್ತಾರ ಡಿಜಿಟಲ್ ಮಾಧ್ಯಮದ ನಿರೂಪಕಿ ಕು. ರಕ್ಷಾ ಜಾರಿಗೆದಡಿ, ನುರಿತ ಮರದ ಕೆತ್ತನೆಗಳ ಶಿಲ್ಪಿ ಮತ್ತು ಕಂಬಳ ಓಟಗಾರ ವಿಶ್ವನಾಥ ಆಚಾರ್ಯ ಹಿದ್ದೆಕ್ಯಾರು, ರಾಷ್ಟ್ರಮಟ್ಟದ ಮಹಿಳಾ ಕಬಡ್ಡಿ ಆಟಗಾರ್ತಿ ಕು| ಅನನ್ಯ ಆನಂದ ಪೂಜಾರಿ, ಕಂಬಳ ಓಟದ ಕೋಣಗಳ ಯಜಮಾನ ಗಣೇಶ್ ನಾರಾಯಣ ಪಂಡಿತ್, ಜನಪ್ರಿಯ ಪಶು ಚಿಕಿತ್ಸಕ ಪ್ರದೀಪ್ ಶೆಟ್ಟಿ, ಯಕ್ಷಗಾನ ಕಲಾವಿದ ಸತೀಶ್ ನಯನಾಡು, ಕಿರುತೆರೆಯ ಖ್ಯಾತ ನೃತ್ಯ ಕಲಾವಿದೆ ಕು| ಆಪ್ತಿ ಪೂಜಾರಿ, ರಾಷ್ಟ್ರೀಯ ಕಬಡ್ಡಿ ಆಟಗಾರ ಸುಶಾಂತ್ ಶೆಟ್ಟಿ, ಸಿ.ಎ. ಇಂಟರ್ ಮಿಡಿಯೇಟ್ ರ್‍ಯಾಂಕ್ ವಿದ್ಯಾರ್ಥಿ ದೀಪಕ್ ಹೆಗ್ಡೆ ಇವರನ್ನು ಗೌರವಿಸಲಾಗುವುದು.

ಪ್ರವೇಶ ಶುಲ್ಕ ರೂ.500/, ಬಹುಮಾನಗಳು ಪ್ರಥಮ ರೂ. 15,555/- ಹಾಗೂ ಶ್ರೀ ಸತ್ಯನಾರಾಯಣ ಟ್ರೋಫಿ, ದ್ವಿತೀಯ ರೂ. 10,555/- ಹಾಗೂ ಟ್ರೋಫಿ, ತೃತೀಯ ರೂ. 5,555/- ಹಾಗೂ ಟ್ರೋಫಿ, ಚತುರ್ಥ ರೂ. 5,555/- ಹಾಗೂ ಟ್ರೋಫಿ.

ಸಮಾರೋಪ ಸಮಾರಂಭವು ಡಿ.1ರಂದು ಬೆಳಿಗ್ಗೆ ಜರಗಲಿದೆ ಎಂದು ಸ್ಥಾಪಕಾಧ್ಯಕ್ಷ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ರಮೇಶ್ ಕುಡ್ಮೇರು, ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಜಾರಿಗೆದಡಿ, ಅಧ್ಯಕ್ಷ ಕಿಶೋರ್ ಕುಮಾರ್ ಕಾರ್ಯದರ್ಶಿ ಮೋಹನ್ ಬಿ.ಸಿ ಹೊಸಪಟ್ಣ ತಿಳಿಸಿದ್ದಾರೆ.

Related posts

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!