30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಯನಕ್ಕಾಗಿ 25 ಜನ ಸದಸ್ಯರ ಮೇಘಾಲಯ ರಾಜ್ಯದ ಸಹಕಾರಿ ಇಲಾಖೆಯ ಅಧಿಕಾರಿಗಳ ತಂಡವು ನ.28 ರಂದು ಬೇಟಿ ನೀಡಿತು.

ಈ ತಂಡದಲ್ಲಿ ಮೇಘಾಲಯ ರಾಜ್ಯದ ಸಹಕಾರಿ ಇಲಾಖೆಯ ಅಧಿಕಾರಿಗಳು ಇದ್ದರು.ತಂಡವು ಸಂಘದ ಕಿಲ್ಲೂರು ಹಾಗೂ ನಾವೂರು ಶಾಖೆಗೆ ಬೇಟಿಯನ್ನು ನೀಡಿತು.ಈ ಸಂದರ್ಭದಲ್ಲಿ ಸಂಘದ ಮುಖಾಂತರ ವಿತರಣೆಯಾಗುತ್ತಿರುವ ಸಾಲ ಯೋಜನೆಗಳು ಮತ್ತು ಸಂಘದ ಮುಖಾಂತರ ನಡೆಸುತ್ತಿರುವ ಮಾರಾಟ ವ್ಯವಹಾರಗಳ ಸಮಗ್ರವಾದ ಮಾಹಿತಿಯನ್ನು ಪಡೆದರು.ಹಾಗೂ ಕೇಂದ್ರ ಸರಕಾರ ಹಾಗೂ ನಬಾರ್ಡ್ ಯೋಜನೆಯಡಿಯಲ್ಲಿ ನಿರ್ಮಾಣವಾದ ಕಡಿರುದ್ಯಾವರ ಶಾಖೆಯ ವ್ಯವಹಾರದ ಮಾಹಿತಿಯನ್ನು ಪಡೆದರು.ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 1020.75 ಕೋಟಿ ವ್ಯವಹಾರವನ್ನು ನಡೆಸಿ. 5062 ಸದಸ್ಯರನ್ನು ಹೊಂದಿ,ರೂ 145 ಕೋಟಿಗೂ ಮಿಕ್ಕಿ ಸಾಲ ನೀಡಲಾಗಿದ್ದು, ಇದರಲ್ಲಿ 67.28 ಕೋಟಿಗೂ ಮಿಕ್ಕಿ ಕೃಷಿ ಸಾಲಗಳನ್ನು ವಿತರಿಸಲಾಗಿದೆ.2023-24 ನೇ ಸಾಲಿನಲ್ಲಿ 4.30 ಕೋಟಿ ಲಾಭಗಳಿಸಿದೆ.ಮತ್ತು 9.77 ಕೋಟಿ ಮಾರಾಟ ವ್ಯವಹಾರವನ್ನು ನಡೆಸಲಾಗಿದೆ.ಸಂಘವು ಪೂರ್ಣ ಪ್ರಮಾಣದ ಏಳು ಶಾಖೆಗಳನ್ನು ಹೊಂದಿದ್ದು, ಪತ್ತು ಮತ್ತು ಪತ್ತೇತರ ವ್ಯವಹಾರಗಳನ್ನು ನಡೆಸುತ್ತಿದೆ.ಈ ಎಲ್ಲಾ ವ್ಯವಹಾರಗಳ ಯಶಸ್ವಿ ಅನುಷ್ಟಾನದಿಂದ ನಬಾರ್ಡಿನ ಗಮನ ಸೆಳೆದಿದ್ದು, ಸಂಘದ ಯಶಸ್ವೀ ವ್ಯವಹಾರಕ್ಕೆ ಅಪೆಕ್ಸ್‌ ಬ್ಯಾಂಕಿನ ರಾಜ್ಯದ ಅತ್ಯುತ್ತಮ ಸಹಕಾರ ಸಂಘ ಮತ್ತು ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕಿನಿಂದ ಜಿಲ್ಲಾ ಮಟ್ಟದ ಉತ್ತಮ ಸಹಕಾರ ಸಂಘವೇಂಬ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ನಬಾರ್ಡ್ ಸಂಸ್ಥೆಯ ಡಿ.ಡಿ.ಎಮ್ ಸತೀಶನ್ ಕರ್ತಾ,ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶ್ರೀ ದಯಾನಂದ ಶೆಟ್ಟಿಗಾರ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಗೌಡ, ಶಾಖಾ ವ್ಯವಸ್ಥಾಪಕರುಗಳಾದ ಪ್ರಕಾಶ್ ಕುಮಾರ್, ರಮಾನಂದ.ಕೆ, ಚಂದ್ರಹಾಸ ಮತ್ತು ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya
error: Content is protected !!