30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದಲ್ಲಿ ಸುಮಾರು 17 ವರ್ಷ 5 ತಿಂಗಳು ಸೇವೆ ಸಲ್ಲಿಸಿದ ಶಿಕ್ಷಕಿ ಶ್ರೀಮತಿ ನೇಮಮ್ಮ ರವರು ವರ್ಗಾವಣೆಗೊಂಡಿದ್ದು, ಹಾಗೆಯೇ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರು ಸೇವಾ ನಿವೃತ್ತಿ ಹೊಂದಿದ್ದು, ಇವರಿಗೆ ನ. 28ರಂದು ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪಿಕೆ, ಬಳಂಜ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್, ಟ್ರಸ್ಟಿಗಳಾದ ಬಿ ಪ್ರಮೋದ್ ಕುಮಾರ್ ಮತ್ತು ವಿನು ಬಳಂಜ, ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ,ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕ ಮಲ್ಲಿಕಾರ್ಜುನ ಆರ್ ನಿರೂಪಿಸಿ, ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಸಿ ಆರ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಕೀರ್ತಿ ವಂದಿಸಿದರು. ಎಲ್ಲಾ ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya
error: Content is protected !!