22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

ಮಂಗಳೂರು: ವಿಧಾನಸಭೆಯ ಮೂರು ಕ್ಷೇತ್ರ ಹಾಗೂ ಗ್ರಾಮ ಪಂಚಾಯತ್ ಉಪಚುನಾವಣೆಯನ್ನು ಗಮನಿಸಿದಾಗ ಮತದಾರ ಕಾಂಗ್ರೆಸ್ ಪರ ಒಲವು ಹೊಂದಿರುವುದು ದೃಢವಾಗಿದೆ. ದಕ್ಷಿಣ ಕನ್ನಡದಲ್ಲೂ ಬದಲಾವಣೆಯ ವಾತಾವರಣವಿದ್ದು, 30 ಗ್ರಾಪಂ ಕ್ಷೇತ್ರಗಳು ಮತ್ತು ಪುರಸಭೆಯ 1 ಕ್ಷೇತ್ರ ಸಹಿತ ಒಟ್ಟು 31 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 24 ಕ್ಷೇತ್ರಗಳನ್ನು ಗೆದ್ದಿದೆ, ಬಿಜೆಪಿ 7ಕ್ಕೆ ಕುಸಿದಿದೆ. ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ ನೀಡಿರುವುದು ಸಾಬೀತಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 31 ಕ್ಷೇತ್ರಗಳ ಪೈಕಿ ಚುನಾವಣೆಗೆ ಮೊದಲು 14ರಲ್ಲಿ ಕಾಂಗ್ರೆಸ್ ಬೆಂಬಲಿಗರು ಇದ್ದರೆ, ಬಿಜೆಪಿ ಸಂಖ್ಯೆ 17 ಇತ್ತು. ಕಳೆದ ವಿಧಾನಸಭೆ ಚುನಾವಣೆಗಿಂತ ಮುಂಚೆ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂಬ ಬಿಜೆಪಿಯವರ ಅಪಪ್ರಚಾರವನ್ನು ಜನ ನಂಬಿದ್ದರು. ಈಗ ಗ್ಯಾರಂಟಿ ಯಶಸ್ವಿಯಾಗಿ ಅನುಷ್ಠಾನವಾಗಿರುವುದರಿಂದ ಜನ ಬಿಜೆಪಿಯ ಅಪಪ್ರಚಾರಗಳಿಗೆ ಸೊಪ್ಪು ಹಾಕಿಲ್ಲ. ಮುಂದಿನ ವರ್ಷ ಮಂಗಳೂರು ಮಹಾನಗರ ಪಾಲಿಕೆ, ಜಿ.ಪಂ., ತಾ.ಪಂ. ಚುನಾವಣೆಗಳು ನಡೆಯಲಿದ್ದು, ಕಾಂಗ್ರೆಸ್ ಗೆದ್ದು ಅಧಿಕಾರದ ಗದ್ದುಗೆ ಏರುವುದು ನಿಶ್ಚಿತ. ಗ್ಯಾರಂಟಿ ಫಲಾನುಭವಿ ಮಹಿಳಾ ಮತದಾರರು ಕಾಂಗ್ರೆಸ್ ಜತೆಗಿದ್ದಾರೆ ಎಂದು ಹರೀಶ್ ಕುಮಾ‌ರ್ ವಿಶ್ವಾಸ ವ್ಯಕ್ತಪಡಿಸಿದರು.

Related posts

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya
error: Content is protected !!