25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

ಬೆಳ್ತಂಗಡಿ : ಏಡ್ಸ್ ಎಂದರೆ ಶಾಪವಲ್ಲ, ಏಡ್ಸ್ ಸೋಂಕಿತರಿಗೂ ಈ ಸಮಾಜದಲ್ಲಿ ಬದುಕುವ ಹಕ್ಕಿದೆ. ಅವರಿಗೆ ತಾರತಮ್ಯ ಮಾಡುವುದು ಸರಿಯಲ್ಲ. ಹೆಚ್.ಐ.ವಿ. / ಏಡ್ಸ್ ಸೋಂಕಿತ ಹಾಗೂ ಪೀಡಿತರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ ನಿಟ್ಟಿನಲ್ಲಿ ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ನೆರಿಯ ಸಂತ ಥೋಮಸ್ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ತ್ರೇಸ್ಯಾ ಕೆ.ಪಿ. ಅಭಿಪ್ರಾಯಪಟ್ಟರು. ಅವರು ನ. 29 ರಂದು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯು ಆಯೋಜಿಸಿದ ವಿಶ್ವ ಏಡ್ಸ್ ದಿನಾಚರಣಾ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಮೂಲಕ ನಡೆಸಲ್ಪಡುವ ನವಜೀವನ ಹೆಚ್.ಐ.ವಿ/ ಏಡ್ಸ್ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಹೆಚ್.ಐ.ವಿ./ ಏಡ್ಸ್ ರೋಗದ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಗಣಿತ ಶಿಕ್ಷಕರಾದ ಫಾ. ಸೆಬಾಸ್ಟಿಯನ್ ಪುನ್ನತ್ತಾನತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಬೇಬಿ ಜೋಸೆಫ್ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಶಾಲೆಯ ಒಟ್ಟು 90 ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya
error: Content is protected !!