July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

ಬೆಳ್ತಂಗಡಿ; ಕರಾವಳಿ‌ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದುದು ಈಗ ಬದಲಾಗಿ ಕೋಮು ಸಂಘರ್ಷದ ಜಿಲ್ಲೆಯಾಗಿ ಕುಖ್ಯಾತಿ ಪಡೆದಿದೆ. ಆದ್ದರಿಂದ ಯಾರದ್ದೋ ಸ್ವಾರ್ಥಿಗಳ ದ್ವೇಷ ಭಾಷಣದ ಹಿಂದೆ ಬೀಳದೆ ಜಾತಿ‌ಭೇದವಿಲ್ಲದೆ ಎಲ್ಲರಿಗೂ ಸಹಾಯ ಮಾಡುವ ಇಂತಹಾ ಸತ್ಕಾರ್ಯಗಳ ವೇದಿಕೆಯನ್ನು ಕಂಡು ಪ್ರಚೋದನೆ ಪಡೆಯೋಣ ಎಂದು ಸುನ್ನೀ ಯುವಜನ ಸಂಘದ (ಎಸ್‌ವೈಎಸ್) ಕಾರ್ಕಳ ಝೋನ್ ಕಾರ್ಯದರ್ಶಿ ಮೌಲಾನಾ ಹುಸೈನ್ ಸ‌ಅದಿ ಹೊಸ್ಮಾರ್ ಅಭಿಪ್ರಾಯಪಟ್ಟರು.

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ರಿ. ಇದರ ವತಿಯಿಂದ ಬೆಳ್ತಂಗಡಿ ಸುವರ್ಣ ಆರ್ಕೆಡ್ ಸಭಾಂಗಣದಲ್ಲಿ ನ.28 ರಂದು ನಡೆದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ ಮತ್ತು ಔಷಧ ಕಿಟ್ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಮುಖ್ಯ ಅತಿಥಿಯಾಗಿದ್ದ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತಮಾಡಿ, ಸಂಪತ್ತು ಬಂದಾಗ ನಮ್ಮ ಪತ್ನಿ, ಮಕ್ಕಳು, ಸಮುದಾಯ ಎಂಬ ಆಲೋಚನೆ ಮಾತ್ರ ಕೆಲವರಿಗೆ ಬರುತ್ತದೆ. ಆದರೆ ಅಶ್ರಫ್ ಬಜ್ಪೆ ಅವರು ಅದೆಲ್ಲವನ್ನೂ ಮೀರಿ ಇಡೀ‌ ಸಮಾಜದ ಪರಿಕಲ್ಪನೆಯಡಿ ಎಲ್ಲಾ ಜಾತಿ ಧರ್ಮದವರಿಗೂ ನೆರವು ನೀಡುತ್ತಿರುವುದು ಶ್ರೇಷ್ಠ ಕಾರ್ಯ. ರಾಜ್ಯದಲ್ಲಿ ಎಲ್ಲರಿಗೂ ನೆರವು ನೀಡುವ ಕೆಲಸ ಸರಕಾರ ಮಾಡುತ್ತಿದೆ. ಮಹಿಳೆಯರು ಶಕ್ತಿವಂತರಾದರೆ ದೇಶ ಶಕ್ತಿವಂತವಾಗುತ್ತದೆ ಎಂದರು.

ಮೋಟಿವೇಷನ್ ಟ್ರೈನರ್ ರಫೀಕ್ ಮಾಸ್ಟರ್ ಮಾತನಾಡಿ, ಎಲ್ಲಾ ಕೈಗಳಿಗಿಂತ ದಾನ ಮಾಡುವ ಕೈ ಶ್ರೇಷ್ಠ. ಆವಶ್ಯಕತೆ‌ ಇರುವವರಿಗೆ ಮತ್ತು ಹಸಿದವರಿಗೆ ನೀಡುವ ಸಹಾಯ ಸ್ವರ್ಗದ ಬಾಗಿಲಿನವರೆಗೆ ತಂದು ನಿಲ್ಲಿಸಬಹುದು ಎಂದರು.

ಪೊಲೀಸ್‌ ಇನ್ಸ್‌ಪೆಕ್ಟರ ಬಿ.ಜಿ ಸುಬ್ಬಾಪೂರಮಠ, ಪತ್ರಕರ್ತರಾದ ಅಶ್ರಫ್ ಆಲಿಕುಂಞಿ ಮುಂಡಾಜೆ ಮತ್ತು ಮನೋಹರ ಬಳೆಂಜ, ಶರೀಫ್ ಮಲ್ನಾಡ್ ಕಳಸ, ಝುಬೈರ್ ಮಂಗಳೂರು, ಉದ್ಯಮಿ ಹಾಜಿ ಹಸೈನಾರ್ ಶಾಫಿ ಗುರುವಾಯನಕೆರೆ ಮೊದಲಾದವರು ಶುಭಕೋರಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಮುಹಮ್ಮದ್ ಅಶ್ರಫ್ ಬಜ್ಪೆ ಮಾತನಾಡಿ, ಎಳೆಯ ಪ್ರಾಯದಲ್ಲೇ ತಾಯಿಯನ್ನು ಕಳೆದುಕೊಂಡ ದುಃಖವನ್ನು ಈ ರೀತಿ ಪರರಿಗೆ ಸಹಾಯ ಮಾಡುವ ಮೂಲಕ ಕಳೆಯುತ್ತಿದ್ದೇನೆ. ಹಸಿವಿನ ಮತ್ತು ಬಡತನದ ಬೇಗೆಯಿಂದ ಬೆಂದ ಕರಾಳ ದಿನಗಳನ್ನು ನೆನಪಿಸುತ್ತಾ ಅರ್ಹರ ಕಣ್ಣೀರೊರೆಸುವ ಕಾರ್ಯ ಮಾಡುತ್ತಿದ್ದೇನೆ. ನಮ್ಮ ದುಡಿಮೆಯ ಒಂದಂಶ ಸಮಾಜಕ್ಕೆ ಕೊಟ್ಟು ಜವಾಬ್ಧಾರಿ ತೊರುತ್ತಿದ್ದೇನೆ. ಇದರಲ್ಲಿ ಆತ್ಮ‌ತೃಪ್ತಿ ಪಡೆದಿದ್ದೇನೆ ಎಂದರು.

ವೇದಿಕೆಯಲ್ಲಿ ಸುವರ್ಣ ಆರ್ಕೆಡ್ ಮಾಲಕ ನಾಣ್ಯಪ್ಪ ಪೂಜಾರಿ, ಅಬ್ದುಲ್ ಖಾದರ್, ಲತೀಫ್ ಉಣ್ಣಾಲು, ಜುನೈದ್‌ ಅಝ್ಹರಿ ಉಣ್ಣಾಲು, ಇಬ್ರಾಹಿಂ ಮುಸ್ಲಿಯಾರ್, ಆಸಿಫ್ ಉಪ್ಪಿನಂಗಡಿ ಮೊದಲಾದವರು ಉಪಸ್ಥಿತರಿದ್ದರು.

ಈ ವೇಳೆ 103ಮಂದಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನಿಧಿ,‌ 88 ಫಲಾನುಭವಿಗಳಿಗೆ ಆಹಾರದ ಕಿಟ್, 3 ಫಲಾನುಭವಿಗಳಿಗೆ ಔಚಧಿ ಕಿಟ್ ಹಾಗೂ 80 ಮಂದಿ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲಾಯಿತು.

ನ್ಯೂ‌ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ರಿ. ಕಚೇರಿ ವ್ಯವಸ್ಥಾಪಕ ಇಸ್ಮಾಯಿಲ್ ಗುರುವಾಯನಕೆರೆ ಅವರನ್ನು ಗೌರವಿಸಲಾಯಿತು.

ಸಿಬ್ಬಂದಿಗಳು ಸಹಕರಿಸಿದರು. ಸಮದ್ ಮಂಗಳೂರು ಕಾರ್ಯಕ್ರಮ ನಿರೂಪಿಸಿದರು.

Related posts

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya
error: Content is protected !!