March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ 1999-2001 ಸಾಲಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ತರಗತಿ ಕೊಠಡಿಗೆ ಕೊಡುಗೆಯಾಗಿ ನೀಡಿದ ಹೊಸ ಪ್ರೊಜೆಕ್ಟ್ಟರನ್ನು ಕಾಲೇಜಿನ ವಾರ್ಷಿಕೋತ್ಸವದ ದಿನ ಕಾಲೇಜಿನ ಪ್ರಾಚಾರ್ಯರು, ಮುಖ್ಯ ಅತಿಥಿಗಳು, ಉಪನ್ಯಾಸಕ ವೃಂದದವರು , ವಿದ್ಯಾರ್ಥಿಗಳ ಸಮ್ಮುಖದಲ್ಲಿ ಹಳೆ ವಿದ್ಯಾರ್ಥಿಗಳಾದ ನವೀನ್ ಪೂಜಾರಿ ಪಚ್ಚೆರಿ, ಜಗನ್ನಾಥ ದೇವಾಡಿಗ ವೇಣೂರು, ಲೋಕೇಶ್ ಪೂಜಾರಿ ಗುಂಡೂರಿ, ಶ್ರೀಮತಿ ವೀಣಾ ಎಸ್ ಹೆಗ್ಡೆ ಕಾರ್ಕಳ ರವರು ಅನಾವರಣಗೊಳಿಸಿದರು.


ಸಂಸ್ಥೆಯ ಪ್ರಾಚಾರ್ಯರಾದ ಗಂಗಾಧರ್ ಹಳೆ ವಿದ್ಯಾರ್ಥಿಗಳು ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ ವಿಜ್ಞಾನ ವಿಭಾಗದ ಪ್ರಸಕ್ತ ಹಾಗೂ ಮುಂದೆ ವ್ಯಾಸಾಂಗ ಮಾಡಲಿರುವ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗೆ ಅನುಕೂಲವಾಗಲಿದೆ ಎಂದರು.


ಸಮಾರಂಭದಲ್ಲಿ ಪ್ರೊಜೆಕ್ಟರ್ ಕೊಡುಗೆ ನೀಡಿದ ಹಳೆ ವಿದ್ಯಾರ್ಥಿಗಳಿಗೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾಲೇಜಿನ ವತಿಯಿಂದ ಪ್ರಾಚಾರ್ಯರು, ಅತಿಥಿಗಳು ಶಾಲು ಹೊದಿಸಿ ಅಭಿನಂದಿಸಿದರು.
ಹಳೆ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ ಜಗನ್ನಾಥ ದೇವಾಡಿಗ ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಗಿಸಿ 23 ವರ್ಷಗಳ ನಂತರ ನಾವೆಲ್ಲ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಸಂಸ್ಥೆಗೆ ಏನಾದರು ನೀಡಬೇಕೆಂದು ಆಲೋಚಿಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರೊಜೆಕ್ಟರ್ ರನ್ನು ಕೊಡುಗೆಯಾಗಿ ನೀಡಿರುತ್ತೇವೆ. ಸಹಕಾರ ನೀಡಿದ ನಮ್ಮ ಸಹಪಾಠಿಗಳಾದ ಮಹಮ್ಮದ್ ಶಬ್ಬೀರ್ ದುಬೈ ವೇಣೂರು, ಶ್ರೀಮತಿ ಸುಜಾತ ಆಸ್ಟ್ರೇಲಿಯಾ , ಶ್ರೀಮತಿ ಅರ್ಚನಾ ಅನೂಪ್ ಶೆಟ್ಟಿ ಮಂಗಳೂರು, ರಾಜೇಶ್ ಪೈ ವೇಣೂರು, ಶ್ರೀಮತಿ ದಿವ್ಯ ಪಿ ರೈ ಪುತ್ತೂರು, ಶ್ರೀಮತಿ ಕುಶಲತಾ ಮಂಗಳೂರು, ಶ್ರೀಮತಿ ಪೂರ್ಣಿಮಾ ಮಡಂತ್ಯಾರ್, ಶ್ರೀಮತಿ ಶ್ಯಾಮಲಾ ಅಂಡಿಂಜೆ, ಸುಧಾಕರ ಕುಲಾಲ್ ಪೆರ್ಮುಡ, ಶ್ರೀಮತಿ ಜಯಶ್ರೀ ಸಾಂಗ್ಲಿ ಯವರಿಗೆ ಕೃತಜ್ಞತೆ ಸಲ್ಲಿಸಿದರು.

Related posts

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಎಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ: ದಿ. ಪ್ರೊ. ಎಸ್. ಪ್ರಭಾಕರ್ ರವರಿಗೆ ನುಡಿನಮನ

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya
error: Content is protected !!