30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

ಉಜಿರೆ : ನೀವು ಕಲಿಯುವ ಕೌಶಲ್ಯವು ನಿತ್ಯ ಪೂಜೆಯ ತರದಲ್ಲಿ ಅಭ್ಯಾಸ ಮಾಡಿದಾಗ ಮಾತ್ರ ಪರಿಪೂರ್ಣವಾಗುತ್ತದೆ. ಈ ಸಿದ್ದವನ ಪರಿಸರದಲ್ಲಿ ಆರಂಭವಾದ ಸಂಸ್ಥೆಗಳು ಅತ್ಯುತ್ತಮವಾದ ಪ್ರಗತಿಯನ್ನು ಹೊಂದಿದೆ. ಇಂದು ರಬ್ಬರ ಕೃಷಿ ಉತ್ತಮವಾದ ಕೃಷಿಯಾಗಿದೆ ಯಾಕೆಂದರೆ ರಬ್ಬರ ಅನೇಕ ವಸ್ತುಗಳ ತಯಾರಿಕೆಗೆ ಪೂರಕವಾಗಿದೆ. ರಬ್ಬರ್‌ ಕೃಷಿಯಲ್ಲಿ ರಬ್ಬರ್‌ ಟ್ಯಾಪಿಂಗ್‌ ಮುಖ್ಯ ಪಾತ್ರವಾಗಿದೆ. ಉತ್ತಮವಾದ ಟ್ಯಾಪರ್‌ ಇದ್ದಲ್ಲಿ ಉತ್ತಮವಾದ ಆದಾಯ ಪಡೆಯಲು ಸಾಧ್ಯವಾಗುತ್ತದೆ. ನಿಮ್ಮ ಕೌಶಲ್ಯದಲ್ಲಿ ನಿರಂತರವಾದ ಅಭ್ಯಾಸ ಮಾಡಿ ಅದನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬೇಡಿ. ರಬ್ಬರ್‌ ಸೋಸೈಟಿಯಲ್ಲಿ ರಬ್ಬರ್‌ ಬೆಳೆಗಾರರಿಗೆ ಬೇಕಾದ ಅನುಕೂಲತೆಗಳನ್ನು ಸಹಾಯಧನ ರೂಪದಲ್ಲಿ ಒದಗಿಸುತ್ತಿದೆ ಅದರ ಪ್ರಯೋಜನ ಪಡೆದುಕೊಳ್ಳಿ. ರಬ್ಬರ್‌ ಬೆಳೆಯಲ್ಲಿ ಪರಾವಂಲಬನೆ ಕಡಿಮೆ. ಇತರ ಬೆಳೆಗಳಲ್ಲಿ ಪರಾವಂಲಬನೆ ಹೆಚ್ಚು ಇರುತ್ತದೆ. ರಬ್ಬರ್‌ಗೆ ಬೇಡಿಕೆ ಇನ್ನು ಮುಂದಿನಗಳಲ್ಲಿ ಇನ್ನೂ ಆಗುತ್ತದೆ. ನೀವು ಕಲಿತ ವಿದ್ಯೆಯ ನಿಮಗೆ ಯಶಸ್ಸು ತರಲಿ. ಎಂದು ಉಜಿರೆಯ ಬೆಳ್ತಂಗಡಿ ತಾಲೂಕು ರಬ್ಬರ್‌ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷರಾ ಶ್ರೀಧರ ಜಿ ಭಿಡೆ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 10 ದಿನಗಳ ಕಾಲ ನಡೆದೆ “ರಬ್ಬರ್‌ ಟ್ಯಾಪಿಂಗ್‌ ʼʼತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ ತಮ್ಮ ಅನುಭವದ ಹಂಚಿಕೊಂಡು ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ರಾಘವೇಂದ್ರ ಮತ್ತು ರಮೇಶ್‌ ಪ್ರಾರ್ಥನೆ ಮಾಡಿದರು. ಶಿಬಿರಾರ್ಥಿಗಳಾದ ರಾಜು, ರಾಘವೇಂದ್ರ, ಅಖೀಲ್‌ ತನ್ನ ತರಬೇತಿಯ ಅನುಭವ ಹಂಚಿಕೊಂಡರು.

Related posts

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!