24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

ಬೆಳ್ತಂಗಡಿ: ಉತ್ತರ ಗೋವಾದ ಪರ್ವಾರಿ ಪುಂಡಲೀಕ ದೇವಸ್ಥಾನದ ಸಭಾ ಗ್ರಹದಲ್ಲಿ ತುಳುನಾಡಿನ ಗಂಡು ಮೆಟ್ಟಿನ ಕಲೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಯಕ್ಷಗಾನ ಮೇಳದ ಮೂರನೇ ವರ್ಷದ ಯಕ್ಷಗಾನ ಗೆಜ್ಜೆ ಗಿರಿ ಕ್ಷೇತ್ರ ಮಹಾತ್ಮೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಚಾಲನೆ ನೀಡಿದರು.

ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಮಾಜಿ ಅಧ್ಯಕ್ಷ ಜಯಂತ ನಡುಬೈಲ್, ಉದ್ಯಮಿ ಮೋಹನ್ ಶೆಟ್ಟಿ, ಗೋವಾ ತುಳುಕೂಟದ ಅಧ್ಯಕ್ಷ ಗಣೇಶ ಇರುವತ್ತೂರು, ಯಕ್ಷಗಾನ ಸಂಚಾಲಕರಾದ ಪ್ರಶಾಂತ ಪೂಜಾರಿ ಮಸ್ಕತ್, ನವೀನ್ ಸುವರ್ಣ, ಜಯಾನಂದ ಎಂ, ಜಯರಾಮ ಬಂಗೇರ ನಾರಾಯಣ ಮಚ್ಚಿನ , ಗೋವಾ ಬಿಲ್ಲವ ಸಂಘದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಗೋವಾ ರಾಜ್ಯದಲ್ಲಿ ಸಮಾಜದ ಸದಸ್ಯರನ್ನು ಸಂಘಟಿಸಿದ್ದ , ಗೌರವಾಧ್ಯಕ್ಷ ಚಂದ್ರ ಹಾಸ ಅಮೀನ್ ದಂಪತಿಗಳನ್ನು ಕ್ಷೇತ್ರದ ವತಿಯಿಂದ ಅಭಿನಂದಿಸಲಾಯಿತು.. ಬಳಿಕ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ ಮಂಡಳಿಯಿಂದ ಗೆಜ್ಜೆ ಗಿರಿ ಕ್ಷೇತ್ರ ಮಹಾತ್ಮೆ ಎಂಬ ಐತಿಹಾಸಿಕ ಯಕ್ಷಗಾನ ಪ್ರಸಂಗ ವಿಜೃಂಭಣೆಯಿಂದ ನಡೆಯಿತು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya
error: Content is protected !!