27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

ಮಂಗಳೂರು: ವಿಧಾನಸಭೆಯ ಮೂರು ಕ್ಷೇತ್ರ ಹಾಗೂ ಗ್ರಾಮ ಪಂಚಾಯತ್ ಉಪಚುನಾವಣೆಯನ್ನು ಗಮನಿಸಿದಾಗ ಮತದಾರ ಕಾಂಗ್ರೆಸ್ ಪರ ಒಲವು ಹೊಂದಿರುವುದು ದೃಢವಾಗಿದೆ. ದಕ್ಷಿಣ ಕನ್ನಡದಲ್ಲೂ ಬದಲಾವಣೆಯ ವಾತಾವರಣವಿದ್ದು, 30 ಗ್ರಾಪಂ ಕ್ಷೇತ್ರಗಳು ಮತ್ತು ಪುರಸಭೆಯ 1 ಕ್ಷೇತ್ರ ಸಹಿತ ಒಟ್ಟು 31 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 24 ಕ್ಷೇತ್ರಗಳನ್ನು ಗೆದ್ದಿದೆ, ಬಿಜೆಪಿ 7ಕ್ಕೆ ಕುಸಿದಿದೆ. ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ ನೀಡಿರುವುದು ಸಾಬೀತಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 31 ಕ್ಷೇತ್ರಗಳ ಪೈಕಿ ಚುನಾವಣೆಗೆ ಮೊದಲು 14ರಲ್ಲಿ ಕಾಂಗ್ರೆಸ್ ಬೆಂಬಲಿಗರು ಇದ್ದರೆ, ಬಿಜೆಪಿ ಸಂಖ್ಯೆ 17 ಇತ್ತು. ಕಳೆದ ವಿಧಾನಸಭೆ ಚುನಾವಣೆಗಿಂತ ಮುಂಚೆ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂಬ ಬಿಜೆಪಿಯವರ ಅಪಪ್ರಚಾರವನ್ನು ಜನ ನಂಬಿದ್ದರು. ಈಗ ಗ್ಯಾರಂಟಿ ಯಶಸ್ವಿಯಾಗಿ ಅನುಷ್ಠಾನವಾಗಿರುವುದರಿಂದ ಜನ ಬಿಜೆಪಿಯ ಅಪಪ್ರಚಾರಗಳಿಗೆ ಸೊಪ್ಪು ಹಾಕಿಲ್ಲ. ಮುಂದಿನ ವರ್ಷ ಮಂಗಳೂರು ಮಹಾನಗರ ಪಾಲಿಕೆ, ಜಿ.ಪಂ., ತಾ.ಪಂ. ಚುನಾವಣೆಗಳು ನಡೆಯಲಿದ್ದು, ಕಾಂಗ್ರೆಸ್ ಗೆದ್ದು ಅಧಿಕಾರದ ಗದ್ದುಗೆ ಏರುವುದು ನಿಶ್ಚಿತ. ಗ್ಯಾರಂಟಿ ಫಲಾನುಭವಿ ಮಹಿಳಾ ಮತದಾರರು ಕಾಂಗ್ರೆಸ್ ಜತೆಗಿದ್ದಾರೆ ಎಂದು ಹರೀಶ್ ಕುಮಾ‌ರ್ ವಿಶ್ವಾಸ ವ್ಯಕ್ತಪಡಿಸಿದರು.

Related posts

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya
error: Content is protected !!