23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

ಧರ್ಮಸ್ಥಳ: ನ.26 ರಂದು ನಾಪತ್ತೆಯಾಗಿದ್ದ ಕಲ್ಲೇರಿಯ ನಿವಾಸಿ ಸುರೇಶ್ ಗೌಡ ((52 ವ) ರವರ ಮೃತ ದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ನ.29 ರಂದು ನಡೆದಿದೆ.

ಇವರು ಧರ್ಮಸ್ಥಳ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ತಾಯಿ ಮರಣ ಹೊಂದಿದ ನಂತರ ಮಾನಸಿಕ ಅಸ್ವಸ್ಥಗೊಂಡಿದ್ದ ಸುರೇಶ್ ರವರು ನ.26 ರಂದು ಸಂಜೆ ನಾಪತ್ತೆಯಾಗಿದ್ದರು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಲಸದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದು, ನ. 29ರಂದು ಬೆಳಗ್ಗೆ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವವನ್ನು ಮೇಲಕ್ಕೆತ್ತಿದ್ದು ಶೌರ್ಯ ತಂಡದ ಸ್ವಯಂಸೇವಕ ಮಾಸ್ಟರ್ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಸಚಿನ್ ಬೀಡೆ, ಸುಧೀರ್, ಅನಿಲ್ ಕಿರಣ್ ಗಿರೀಶ್ ಗೌಡ, ರಾಘವೇಂದ್ರ ಉಜಿರೆ ಜೊತೆಗಿದ್ದವರು

ಮೃತರು ಪತ್ನಿ ಹೇಮಲತಾ, ಮಕ್ಕಳಾದ ಪುನೀತ್, ಪ್ರಜ್ವಲ್ ಇವರನ್ನು ಅಗಲಿದ್ದಾರೆ.

Related posts

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!