32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

ಧರ್ಮಸ್ಥಳ: ನ.26 ರಂದು ನಾಪತ್ತೆಯಾಗಿದ್ದ ಕಲ್ಲೇರಿಯ ನಿವಾಸಿ ಸುರೇಶ್ ಗೌಡ ((52 ವ) ರವರ ಮೃತ ದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ನ.29 ರಂದು ನಡೆದಿದೆ.

ಇವರು ಧರ್ಮಸ್ಥಳ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ತಾಯಿ ಮರಣ ಹೊಂದಿದ ನಂತರ ಮಾನಸಿಕ ಅಸ್ವಸ್ಥಗೊಂಡಿದ್ದ ಸುರೇಶ್ ರವರು ನ.26 ರಂದು ಸಂಜೆ ನಾಪತ್ತೆಯಾಗಿದ್ದರು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಲಸದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದು, ನ. 29ರಂದು ಬೆಳಗ್ಗೆ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವವನ್ನು ಮೇಲಕ್ಕೆತ್ತಿದ್ದು ಶೌರ್ಯ ತಂಡದ ಸ್ವಯಂಸೇವಕ ಮಾಸ್ಟರ್ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಸಚಿನ್ ಬೀಡೆ, ಸುಧೀರ್, ಅನಿಲ್ ಕಿರಣ್ ಗಿರೀಶ್ ಗೌಡ, ರಾಘವೇಂದ್ರ ಉಜಿರೆ ಜೊತೆಗಿದ್ದವರು

ಮೃತರು ಪತ್ನಿ ಹೇಮಲತಾ, ಮಕ್ಕಳಾದ ಪುನೀತ್, ಪ್ರಜ್ವಲ್ ಇವರನ್ನು ಅಗಲಿದ್ದಾರೆ.

Related posts

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ