22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

ಧರ್ಮಸ್ಥಳ: ನ.26 ರಂದು ನಾಪತ್ತೆಯಾಗಿದ್ದ ಕಲ್ಲೇರಿಯ ನಿವಾಸಿ ಸುರೇಶ್ ಗೌಡ ((52 ವ) ರವರ ಮೃತ ದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ನ.29 ರಂದು ನಡೆದಿದೆ.

ಇವರು ಧರ್ಮಸ್ಥಳ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ತಾಯಿ ಮರಣ ಹೊಂದಿದ ನಂತರ ಮಾನಸಿಕ ಅಸ್ವಸ್ಥಗೊಂಡಿದ್ದ ಸುರೇಶ್ ರವರು ನ.26 ರಂದು ಸಂಜೆ ನಾಪತ್ತೆಯಾಗಿದ್ದರು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಲಸದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದು, ನ. 29ರಂದು ಬೆಳಗ್ಗೆ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವವನ್ನು ಮೇಲಕ್ಕೆತ್ತಿದ್ದು ಶೌರ್ಯ ತಂಡದ ಸ್ವಯಂಸೇವಕ ಮಾಸ್ಟರ್ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಸಚಿನ್ ಬೀಡೆ, ಸುಧೀರ್, ಅನಿಲ್ ಕಿರಣ್ ಗಿರೀಶ್ ಗೌಡ, ರಾಘವೇಂದ್ರ ಉಜಿರೆ ಜೊತೆಗಿದ್ದವರು

ಮೃತರು ಪತ್ನಿ ಹೇಮಲತಾ, ಮಕ್ಕಳಾದ ಪುನೀತ್, ಪ್ರಜ್ವಲ್ ಇವರನ್ನು ಅಗಲಿದ್ದಾರೆ.

Related posts

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya
error: Content is protected !!