25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.29 ರಂದು ಕಾಲೇಜು ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ತುಳುಪುಳೆ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್, ಲಕ್ಷ್ಮೀ ಇಂಡಸ್ಟ್ರೀಸ್, ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಪ್ರಾಂಶುಪಾಲ ಸುಕುಮಾರ್ ಜೈನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪೂರ್ಣಿಮಾ, ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್, ಸೂರಪ್ಪ ಗೌಡ, ವಿದ್ಯಾರ್ಥಿ ನಾಯಕರುಗಳಾದ ಅಶ್ವಥ್, ಮೇಘನಾ, ಶಶಾಂಕ್, ಶ್ರಾವಣಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರನ್ನು ಸನ್ಮಾನಿಸಲಾಯಿತು.

ಇತಿಹಾಸ ಉಪನ್ಯಾಸಕ ಆನಂದ್ ಡಿ. ಪ್ರಸ್ತಾವಿಸಿ, ಸ್ವಾಗತಿಸಿದರು. ಆಂಗ್ಲ ಭಾಷ ಶಿಕ್ಷಕ ನಾರಾಯಣ ವಂದಿಸಿದರು.

Related posts

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya
error: Content is protected !!