25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ 1999-2001 ಸಾಲಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ತರಗತಿ ಕೊಠಡಿಗೆ ಕೊಡುಗೆಯಾಗಿ ನೀಡಿದ ಹೊಸ ಪ್ರೊಜೆಕ್ಟ್ಟರನ್ನು ಕಾಲೇಜಿನ ವಾರ್ಷಿಕೋತ್ಸವದ ದಿನ ಕಾಲೇಜಿನ ಪ್ರಾಚಾರ್ಯರು, ಮುಖ್ಯ ಅತಿಥಿಗಳು, ಉಪನ್ಯಾಸಕ ವೃಂದದವರು , ವಿದ್ಯಾರ್ಥಿಗಳ ಸಮ್ಮುಖದಲ್ಲಿ ಹಳೆ ವಿದ್ಯಾರ್ಥಿಗಳಾದ ನವೀನ್ ಪೂಜಾರಿ ಪಚ್ಚೆರಿ, ಜಗನ್ನಾಥ ದೇವಾಡಿಗ ವೇಣೂರು, ಲೋಕೇಶ್ ಪೂಜಾರಿ ಗುಂಡೂರಿ, ಶ್ರೀಮತಿ ವೀಣಾ ಎಸ್ ಹೆಗ್ಡೆ ಕಾರ್ಕಳ ರವರು ಅನಾವರಣಗೊಳಿಸಿದರು.


ಸಂಸ್ಥೆಯ ಪ್ರಾಚಾರ್ಯರಾದ ಗಂಗಾಧರ್ ಹಳೆ ವಿದ್ಯಾರ್ಥಿಗಳು ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ ವಿಜ್ಞಾನ ವಿಭಾಗದ ಪ್ರಸಕ್ತ ಹಾಗೂ ಮುಂದೆ ವ್ಯಾಸಾಂಗ ಮಾಡಲಿರುವ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗೆ ಅನುಕೂಲವಾಗಲಿದೆ ಎಂದರು.


ಸಮಾರಂಭದಲ್ಲಿ ಪ್ರೊಜೆಕ್ಟರ್ ಕೊಡುಗೆ ನೀಡಿದ ಹಳೆ ವಿದ್ಯಾರ್ಥಿಗಳಿಗೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾಲೇಜಿನ ವತಿಯಿಂದ ಪ್ರಾಚಾರ್ಯರು, ಅತಿಥಿಗಳು ಶಾಲು ಹೊದಿಸಿ ಅಭಿನಂದಿಸಿದರು.
ಹಳೆ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ ಜಗನ್ನಾಥ ದೇವಾಡಿಗ ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಗಿಸಿ 23 ವರ್ಷಗಳ ನಂತರ ನಾವೆಲ್ಲ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಸಂಸ್ಥೆಗೆ ಏನಾದರು ನೀಡಬೇಕೆಂದು ಆಲೋಚಿಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರೊಜೆಕ್ಟರ್ ರನ್ನು ಕೊಡುಗೆಯಾಗಿ ನೀಡಿರುತ್ತೇವೆ. ಸಹಕಾರ ನೀಡಿದ ನಮ್ಮ ಸಹಪಾಠಿಗಳಾದ ಮಹಮ್ಮದ್ ಶಬ್ಬೀರ್ ದುಬೈ ವೇಣೂರು, ಶ್ರೀಮತಿ ಸುಜಾತ ಆಸ್ಟ್ರೇಲಿಯಾ , ಶ್ರೀಮತಿ ಅರ್ಚನಾ ಅನೂಪ್ ಶೆಟ್ಟಿ ಮಂಗಳೂರು, ರಾಜೇಶ್ ಪೈ ವೇಣೂರು, ಶ್ರೀಮತಿ ದಿವ್ಯ ಪಿ ರೈ ಪುತ್ತೂರು, ಶ್ರೀಮತಿ ಕುಶಲತಾ ಮಂಗಳೂರು, ಶ್ರೀಮತಿ ಪೂರ್ಣಿಮಾ ಮಡಂತ್ಯಾರ್, ಶ್ರೀಮತಿ ಶ್ಯಾಮಲಾ ಅಂಡಿಂಜೆ, ಸುಧಾಕರ ಕುಲಾಲ್ ಪೆರ್ಮುಡ, ಶ್ರೀಮತಿ ಜಯಶ್ರೀ ಸಾಂಗ್ಲಿ ಯವರಿಗೆ ಕೃತಜ್ಞತೆ ಸಲ್ಲಿಸಿದರು.

Related posts

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya
error: Content is protected !!