27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ 1999-2001 ಸಾಲಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ತರಗತಿ ಕೊಠಡಿಗೆ ಕೊಡುಗೆಯಾಗಿ ನೀಡಿದ ಹೊಸ ಪ್ರೊಜೆಕ್ಟ್ಟರನ್ನು ಕಾಲೇಜಿನ ವಾರ್ಷಿಕೋತ್ಸವದ ದಿನ ಕಾಲೇಜಿನ ಪ್ರಾಚಾರ್ಯರು, ಮುಖ್ಯ ಅತಿಥಿಗಳು, ಉಪನ್ಯಾಸಕ ವೃಂದದವರು , ವಿದ್ಯಾರ್ಥಿಗಳ ಸಮ್ಮುಖದಲ್ಲಿ ಹಳೆ ವಿದ್ಯಾರ್ಥಿಗಳಾದ ನವೀನ್ ಪೂಜಾರಿ ಪಚ್ಚೆರಿ, ಜಗನ್ನಾಥ ದೇವಾಡಿಗ ವೇಣೂರು, ಲೋಕೇಶ್ ಪೂಜಾರಿ ಗುಂಡೂರಿ, ಶ್ರೀಮತಿ ವೀಣಾ ಎಸ್ ಹೆಗ್ಡೆ ಕಾರ್ಕಳ ರವರು ಅನಾವರಣಗೊಳಿಸಿದರು.


ಸಂಸ್ಥೆಯ ಪ್ರಾಚಾರ್ಯರಾದ ಗಂಗಾಧರ್ ಹಳೆ ವಿದ್ಯಾರ್ಥಿಗಳು ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ ವಿಜ್ಞಾನ ವಿಭಾಗದ ಪ್ರಸಕ್ತ ಹಾಗೂ ಮುಂದೆ ವ್ಯಾಸಾಂಗ ಮಾಡಲಿರುವ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗೆ ಅನುಕೂಲವಾಗಲಿದೆ ಎಂದರು.


ಸಮಾರಂಭದಲ್ಲಿ ಪ್ರೊಜೆಕ್ಟರ್ ಕೊಡುಗೆ ನೀಡಿದ ಹಳೆ ವಿದ್ಯಾರ್ಥಿಗಳಿಗೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾಲೇಜಿನ ವತಿಯಿಂದ ಪ್ರಾಚಾರ್ಯರು, ಅತಿಥಿಗಳು ಶಾಲು ಹೊದಿಸಿ ಅಭಿನಂದಿಸಿದರು.
ಹಳೆ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ ಜಗನ್ನಾಥ ದೇವಾಡಿಗ ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಗಿಸಿ 23 ವರ್ಷಗಳ ನಂತರ ನಾವೆಲ್ಲ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಸಂಸ್ಥೆಗೆ ಏನಾದರು ನೀಡಬೇಕೆಂದು ಆಲೋಚಿಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರೊಜೆಕ್ಟರ್ ರನ್ನು ಕೊಡುಗೆಯಾಗಿ ನೀಡಿರುತ್ತೇವೆ. ಸಹಕಾರ ನೀಡಿದ ನಮ್ಮ ಸಹಪಾಠಿಗಳಾದ ಮಹಮ್ಮದ್ ಶಬ್ಬೀರ್ ದುಬೈ ವೇಣೂರು, ಶ್ರೀಮತಿ ಸುಜಾತ ಆಸ್ಟ್ರೇಲಿಯಾ , ಶ್ರೀಮತಿ ಅರ್ಚನಾ ಅನೂಪ್ ಶೆಟ್ಟಿ ಮಂಗಳೂರು, ರಾಜೇಶ್ ಪೈ ವೇಣೂರು, ಶ್ರೀಮತಿ ದಿವ್ಯ ಪಿ ರೈ ಪುತ್ತೂರು, ಶ್ರೀಮತಿ ಕುಶಲತಾ ಮಂಗಳೂರು, ಶ್ರೀಮತಿ ಪೂರ್ಣಿಮಾ ಮಡಂತ್ಯಾರ್, ಶ್ರೀಮತಿ ಶ್ಯಾಮಲಾ ಅಂಡಿಂಜೆ, ಸುಧಾಕರ ಕುಲಾಲ್ ಪೆರ್ಮುಡ, ಶ್ರೀಮತಿ ಜಯಶ್ರೀ ಸಾಂಗ್ಲಿ ಯವರಿಗೆ ಕೃತಜ್ಞತೆ ಸಲ್ಲಿಸಿದರು.

Related posts

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya
error: Content is protected !!