22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ 1999-2001 ಸಾಲಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ತರಗತಿ ಕೊಠಡಿಗೆ ಕೊಡುಗೆಯಾಗಿ ನೀಡಿದ ಹೊಸ ಪ್ರೊಜೆಕ್ಟ್ಟರನ್ನು ಕಾಲೇಜಿನ ವಾರ್ಷಿಕೋತ್ಸವದ ದಿನ ಕಾಲೇಜಿನ ಪ್ರಾಚಾರ್ಯರು, ಮುಖ್ಯ ಅತಿಥಿಗಳು, ಉಪನ್ಯಾಸಕ ವೃಂದದವರು , ವಿದ್ಯಾರ್ಥಿಗಳ ಸಮ್ಮುಖದಲ್ಲಿ ಹಳೆ ವಿದ್ಯಾರ್ಥಿಗಳಾದ ನವೀನ್ ಪೂಜಾರಿ ಪಚ್ಚೆರಿ, ಜಗನ್ನಾಥ ದೇವಾಡಿಗ ವೇಣೂರು, ಲೋಕೇಶ್ ಪೂಜಾರಿ ಗುಂಡೂರಿ, ಶ್ರೀಮತಿ ವೀಣಾ ಎಸ್ ಹೆಗ್ಡೆ ಕಾರ್ಕಳ ರವರು ಅನಾವರಣಗೊಳಿಸಿದರು.


ಸಂಸ್ಥೆಯ ಪ್ರಾಚಾರ್ಯರಾದ ಗಂಗಾಧರ್ ಹಳೆ ವಿದ್ಯಾರ್ಥಿಗಳು ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ ವಿಜ್ಞಾನ ವಿಭಾಗದ ಪ್ರಸಕ್ತ ಹಾಗೂ ಮುಂದೆ ವ್ಯಾಸಾಂಗ ಮಾಡಲಿರುವ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗೆ ಅನುಕೂಲವಾಗಲಿದೆ ಎಂದರು.


ಸಮಾರಂಭದಲ್ಲಿ ಪ್ರೊಜೆಕ್ಟರ್ ಕೊಡುಗೆ ನೀಡಿದ ಹಳೆ ವಿದ್ಯಾರ್ಥಿಗಳಿಗೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾಲೇಜಿನ ವತಿಯಿಂದ ಪ್ರಾಚಾರ್ಯರು, ಅತಿಥಿಗಳು ಶಾಲು ಹೊದಿಸಿ ಅಭಿನಂದಿಸಿದರು.
ಹಳೆ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ ಜಗನ್ನಾಥ ದೇವಾಡಿಗ ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಗಿಸಿ 23 ವರ್ಷಗಳ ನಂತರ ನಾವೆಲ್ಲ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಸಂಸ್ಥೆಗೆ ಏನಾದರು ನೀಡಬೇಕೆಂದು ಆಲೋಚಿಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರೊಜೆಕ್ಟರ್ ರನ್ನು ಕೊಡುಗೆಯಾಗಿ ನೀಡಿರುತ್ತೇವೆ. ಸಹಕಾರ ನೀಡಿದ ನಮ್ಮ ಸಹಪಾಠಿಗಳಾದ ಮಹಮ್ಮದ್ ಶಬ್ಬೀರ್ ದುಬೈ ವೇಣೂರು, ಶ್ರೀಮತಿ ಸುಜಾತ ಆಸ್ಟ್ರೇಲಿಯಾ , ಶ್ರೀಮತಿ ಅರ್ಚನಾ ಅನೂಪ್ ಶೆಟ್ಟಿ ಮಂಗಳೂರು, ರಾಜೇಶ್ ಪೈ ವೇಣೂರು, ಶ್ರೀಮತಿ ದಿವ್ಯ ಪಿ ರೈ ಪುತ್ತೂರು, ಶ್ರೀಮತಿ ಕುಶಲತಾ ಮಂಗಳೂರು, ಶ್ರೀಮತಿ ಪೂರ್ಣಿಮಾ ಮಡಂತ್ಯಾರ್, ಶ್ರೀಮತಿ ಶ್ಯಾಮಲಾ ಅಂಡಿಂಜೆ, ಸುಧಾಕರ ಕುಲಾಲ್ ಪೆರ್ಮುಡ, ಶ್ರೀಮತಿ ಜಯಶ್ರೀ ಸಾಂಗ್ಲಿ ಯವರಿಗೆ ಕೃತಜ್ಞತೆ ಸಲ್ಲಿಸಿದರು.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya
error: Content is protected !!