April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

ಬೆಳ್ತಂಗಡಿ: ಉತ್ತರ ಗೋವಾದ ಪರ್ವಾರಿ ಪುಂಡಲೀಕ ದೇವಸ್ಥಾನದ ಸಭಾ ಗ್ರಹದಲ್ಲಿ ತುಳುನಾಡಿನ ಗಂಡು ಮೆಟ್ಟಿನ ಕಲೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಯಕ್ಷಗಾನ ಮೇಳದ ಮೂರನೇ ವರ್ಷದ ಯಕ್ಷಗಾನ ಗೆಜ್ಜೆ ಗಿರಿ ಕ್ಷೇತ್ರ ಮಹಾತ್ಮೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಚಾಲನೆ ನೀಡಿದರು.

ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಮಾಜಿ ಅಧ್ಯಕ್ಷ ಜಯಂತ ನಡುಬೈಲ್, ಉದ್ಯಮಿ ಮೋಹನ್ ಶೆಟ್ಟಿ, ಗೋವಾ ತುಳುಕೂಟದ ಅಧ್ಯಕ್ಷ ಗಣೇಶ ಇರುವತ್ತೂರು, ಯಕ್ಷಗಾನ ಸಂಚಾಲಕರಾದ ಪ್ರಶಾಂತ ಪೂಜಾರಿ ಮಸ್ಕತ್, ನವೀನ್ ಸುವರ್ಣ, ಜಯಾನಂದ ಎಂ, ಜಯರಾಮ ಬಂಗೇರ ನಾರಾಯಣ ಮಚ್ಚಿನ , ಗೋವಾ ಬಿಲ್ಲವ ಸಂಘದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಗೋವಾ ರಾಜ್ಯದಲ್ಲಿ ಸಮಾಜದ ಸದಸ್ಯರನ್ನು ಸಂಘಟಿಸಿದ್ದ , ಗೌರವಾಧ್ಯಕ್ಷ ಚಂದ್ರ ಹಾಸ ಅಮೀನ್ ದಂಪತಿಗಳನ್ನು ಕ್ಷೇತ್ರದ ವತಿಯಿಂದ ಅಭಿನಂದಿಸಲಾಯಿತು.. ಬಳಿಕ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ ಮಂಡಳಿಯಿಂದ ಗೆಜ್ಜೆ ಗಿರಿ ಕ್ಷೇತ್ರ ಮಹಾತ್ಮೆ ಎಂಬ ಐತಿಹಾಸಿಕ ಯಕ್ಷಗಾನ ಪ್ರಸಂಗ ವಿಜೃಂಭಣೆಯಿಂದ ನಡೆಯಿತು.

Related posts

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya
error: Content is protected !!