22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

ಮಂಗಳೂರು: ವಿಧಾನಸಭೆಯ ಮೂರು ಕ್ಷೇತ್ರ ಹಾಗೂ ಗ್ರಾಮ ಪಂಚಾಯತ್ ಉಪಚುನಾವಣೆಯನ್ನು ಗಮನಿಸಿದಾಗ ಮತದಾರ ಕಾಂಗ್ರೆಸ್ ಪರ ಒಲವು ಹೊಂದಿರುವುದು ದೃಢವಾಗಿದೆ. ದಕ್ಷಿಣ ಕನ್ನಡದಲ್ಲೂ ಬದಲಾವಣೆಯ ವಾತಾವರಣವಿದ್ದು, 30 ಗ್ರಾಪಂ ಕ್ಷೇತ್ರಗಳು ಮತ್ತು ಪುರಸಭೆಯ 1 ಕ್ಷೇತ್ರ ಸಹಿತ ಒಟ್ಟು 31 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 24 ಕ್ಷೇತ್ರಗಳನ್ನು ಗೆದ್ದಿದೆ, ಬಿಜೆಪಿ 7ಕ್ಕೆ ಕುಸಿದಿದೆ. ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ ನೀಡಿರುವುದು ಸಾಬೀತಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 31 ಕ್ಷೇತ್ರಗಳ ಪೈಕಿ ಚುನಾವಣೆಗೆ ಮೊದಲು 14ರಲ್ಲಿ ಕಾಂಗ್ರೆಸ್ ಬೆಂಬಲಿಗರು ಇದ್ದರೆ, ಬಿಜೆಪಿ ಸಂಖ್ಯೆ 17 ಇತ್ತು. ಕಳೆದ ವಿಧಾನಸಭೆ ಚುನಾವಣೆಗಿಂತ ಮುಂಚೆ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂಬ ಬಿಜೆಪಿಯವರ ಅಪಪ್ರಚಾರವನ್ನು ಜನ ನಂಬಿದ್ದರು. ಈಗ ಗ್ಯಾರಂಟಿ ಯಶಸ್ವಿಯಾಗಿ ಅನುಷ್ಠಾನವಾಗಿರುವುದರಿಂದ ಜನ ಬಿಜೆಪಿಯ ಅಪಪ್ರಚಾರಗಳಿಗೆ ಸೊಪ್ಪು ಹಾಕಿಲ್ಲ. ಮುಂದಿನ ವರ್ಷ ಮಂಗಳೂರು ಮಹಾನಗರ ಪಾಲಿಕೆ, ಜಿ.ಪಂ., ತಾ.ಪಂ. ಚುನಾವಣೆಗಳು ನಡೆಯಲಿದ್ದು, ಕಾಂಗ್ರೆಸ್ ಗೆದ್ದು ಅಧಿಕಾರದ ಗದ್ದುಗೆ ಏರುವುದು ನಿಶ್ಚಿತ. ಗ್ಯಾರಂಟಿ ಫಲಾನುಭವಿ ಮಹಿಳಾ ಮತದಾರರು ಕಾಂಗ್ರೆಸ್ ಜತೆಗಿದ್ದಾರೆ ಎಂದು ಹರೀಶ್ ಕುಮಾ‌ರ್ ವಿಶ್ವಾಸ ವ್ಯಕ್ತಪಡಿಸಿದರು.

Related posts

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya
error: Content is protected !!