22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

ಬೆಳ್ತಂಗಡಿ : ಏಡ್ಸ್ ಎಂದರೆ ಶಾಪವಲ್ಲ, ಏಡ್ಸ್ ಸೋಂಕಿತರಿಗೂ ಈ ಸಮಾಜದಲ್ಲಿ ಬದುಕುವ ಹಕ್ಕಿದೆ. ಅವರಿಗೆ ತಾರತಮ್ಯ ಮಾಡುವುದು ಸರಿಯಲ್ಲ. ಹೆಚ್.ಐ.ವಿ. / ಏಡ್ಸ್ ಸೋಂಕಿತ ಹಾಗೂ ಪೀಡಿತರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ ನಿಟ್ಟಿನಲ್ಲಿ ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ನೆರಿಯ ಸಂತ ಥೋಮಸ್ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ತ್ರೇಸ್ಯಾ ಕೆ.ಪಿ. ಅಭಿಪ್ರಾಯಪಟ್ಟರು. ಅವರು ನ. 29 ರಂದು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯು ಆಯೋಜಿಸಿದ ವಿಶ್ವ ಏಡ್ಸ್ ದಿನಾಚರಣಾ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಮೂಲಕ ನಡೆಸಲ್ಪಡುವ ನವಜೀವನ ಹೆಚ್.ಐ.ವಿ/ ಏಡ್ಸ್ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಹೆಚ್.ಐ.ವಿ./ ಏಡ್ಸ್ ರೋಗದ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಗಣಿತ ಶಿಕ್ಷಕರಾದ ಫಾ. ಸೆಬಾಸ್ಟಿಯನ್ ಪುನ್ನತ್ತಾನತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಬೇಬಿ ಜೋಸೆಫ್ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಶಾಲೆಯ ಒಟ್ಟು 90 ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya
error: Content is protected !!