25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

ಧರ್ಮಸ್ಥಳ: ನ.26 ರಂದು ನಾಪತ್ತೆಯಾಗಿದ್ದ ಕಲ್ಲೇರಿಯ ನಿವಾಸಿ ಸುರೇಶ್ ಗೌಡ ((52 ವ) ರವರ ಮೃತ ದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ನ.29 ರಂದು ನಡೆದಿದೆ.

ಇವರು ಧರ್ಮಸ್ಥಳ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ತಾಯಿ ಮರಣ ಹೊಂದಿದ ನಂತರ ಮಾನಸಿಕ ಅಸ್ವಸ್ಥಗೊಂಡಿದ್ದ ಸುರೇಶ್ ರವರು ನ.26 ರಂದು ಸಂಜೆ ನಾಪತ್ತೆಯಾಗಿದ್ದರು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಲಸದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದು, ನ. 29ರಂದು ಬೆಳಗ್ಗೆ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವವನ್ನು ಮೇಲಕ್ಕೆತ್ತಿದ್ದು ಶೌರ್ಯ ತಂಡದ ಸ್ವಯಂಸೇವಕ ಮಾಸ್ಟರ್ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಸಚಿನ್ ಬೀಡೆ, ಸುಧೀರ್, ಅನಿಲ್ ಕಿರಣ್ ಗಿರೀಶ್ ಗೌಡ, ರಾಘವೇಂದ್ರ ಉಜಿರೆ ಜೊತೆಗಿದ್ದವರು

ಮೃತರು ಪತ್ನಿ ಹೇಮಲತಾ, ಮಕ್ಕಳಾದ ಪುನೀತ್, ಪ್ರಜ್ವಲ್ ಇವರನ್ನು ಅಗಲಿದ್ದಾರೆ.

Related posts

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya
error: Content is protected !!