23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

ಧರ್ಮಸ್ಥಳ: ನ.26 ರಂದು ನಾಪತ್ತೆಯಾಗಿದ್ದ ಕಲ್ಲೇರಿಯ ನಿವಾಸಿ ಸುರೇಶ್ ಗೌಡ ((52 ವ) ರವರ ಮೃತ ದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ನ.29 ರಂದು ನಡೆದಿದೆ.

ಇವರು ಧರ್ಮಸ್ಥಳ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ತಾಯಿ ಮರಣ ಹೊಂದಿದ ನಂತರ ಮಾನಸಿಕ ಅಸ್ವಸ್ಥಗೊಂಡಿದ್ದ ಸುರೇಶ್ ರವರು ನ.26 ರಂದು ಸಂಜೆ ನಾಪತ್ತೆಯಾಗಿದ್ದರು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಲಸದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದು, ನ. 29ರಂದು ಬೆಳಗ್ಗೆ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವವನ್ನು ಮೇಲಕ್ಕೆತ್ತಿದ್ದು ಶೌರ್ಯ ತಂಡದ ಸ್ವಯಂಸೇವಕ ಮಾಸ್ಟರ್ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಸಚಿನ್ ಬೀಡೆ, ಸುಧೀರ್, ಅನಿಲ್ ಕಿರಣ್ ಗಿರೀಶ್ ಗೌಡ, ರಾಘವೇಂದ್ರ ಉಜಿರೆ ಜೊತೆಗಿದ್ದವರು

ಮೃತರು ಪತ್ನಿ ಹೇಮಲತಾ, ಮಕ್ಕಳಾದ ಪುನೀತ್, ಪ್ರಜ್ವಲ್ ಇವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya
error: Content is protected !!