July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ 1999-2001 ಸಾಲಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ತರಗತಿ ಕೊಠಡಿಗೆ ಕೊಡುಗೆಯಾಗಿ ನೀಡಿದ ಹೊಸ ಪ್ರೊಜೆಕ್ಟ್ಟರನ್ನು ಕಾಲೇಜಿನ ವಾರ್ಷಿಕೋತ್ಸವದ ದಿನ ಕಾಲೇಜಿನ ಪ್ರಾಚಾರ್ಯರು, ಮುಖ್ಯ ಅತಿಥಿಗಳು, ಉಪನ್ಯಾಸಕ ವೃಂದದವರು , ವಿದ್ಯಾರ್ಥಿಗಳ ಸಮ್ಮುಖದಲ್ಲಿ ಹಳೆ ವಿದ್ಯಾರ್ಥಿಗಳಾದ ನವೀನ್ ಪೂಜಾರಿ ಪಚ್ಚೆರಿ, ಜಗನ್ನಾಥ ದೇವಾಡಿಗ ವೇಣೂರು, ಲೋಕೇಶ್ ಪೂಜಾರಿ ಗುಂಡೂರಿ, ಶ್ರೀಮತಿ ವೀಣಾ ಎಸ್ ಹೆಗ್ಡೆ ಕಾರ್ಕಳ ರವರು ಅನಾವರಣಗೊಳಿಸಿದರು.


ಸಂಸ್ಥೆಯ ಪ್ರಾಚಾರ್ಯರಾದ ಗಂಗಾಧರ್ ಹಳೆ ವಿದ್ಯಾರ್ಥಿಗಳು ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ ವಿಜ್ಞಾನ ವಿಭಾಗದ ಪ್ರಸಕ್ತ ಹಾಗೂ ಮುಂದೆ ವ್ಯಾಸಾಂಗ ಮಾಡಲಿರುವ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗೆ ಅನುಕೂಲವಾಗಲಿದೆ ಎಂದರು.


ಸಮಾರಂಭದಲ್ಲಿ ಪ್ರೊಜೆಕ್ಟರ್ ಕೊಡುಗೆ ನೀಡಿದ ಹಳೆ ವಿದ್ಯಾರ್ಥಿಗಳಿಗೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾಲೇಜಿನ ವತಿಯಿಂದ ಪ್ರಾಚಾರ್ಯರು, ಅತಿಥಿಗಳು ಶಾಲು ಹೊದಿಸಿ ಅಭಿನಂದಿಸಿದರು.
ಹಳೆ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ ಜಗನ್ನಾಥ ದೇವಾಡಿಗ ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಗಿಸಿ 23 ವರ್ಷಗಳ ನಂತರ ನಾವೆಲ್ಲ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಸಂಸ್ಥೆಗೆ ಏನಾದರು ನೀಡಬೇಕೆಂದು ಆಲೋಚಿಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರೊಜೆಕ್ಟರ್ ರನ್ನು ಕೊಡುಗೆಯಾಗಿ ನೀಡಿರುತ್ತೇವೆ. ಸಹಕಾರ ನೀಡಿದ ನಮ್ಮ ಸಹಪಾಠಿಗಳಾದ ಮಹಮ್ಮದ್ ಶಬ್ಬೀರ್ ದುಬೈ ವೇಣೂರು, ಶ್ರೀಮತಿ ಸುಜಾತ ಆಸ್ಟ್ರೇಲಿಯಾ , ಶ್ರೀಮತಿ ಅರ್ಚನಾ ಅನೂಪ್ ಶೆಟ್ಟಿ ಮಂಗಳೂರು, ರಾಜೇಶ್ ಪೈ ವೇಣೂರು, ಶ್ರೀಮತಿ ದಿವ್ಯ ಪಿ ರೈ ಪುತ್ತೂರು, ಶ್ರೀಮತಿ ಕುಶಲತಾ ಮಂಗಳೂರು, ಶ್ರೀಮತಿ ಪೂರ್ಣಿಮಾ ಮಡಂತ್ಯಾರ್, ಶ್ರೀಮತಿ ಶ್ಯಾಮಲಾ ಅಂಡಿಂಜೆ, ಸುಧಾಕರ ಕುಲಾಲ್ ಪೆರ್ಮುಡ, ಶ್ರೀಮತಿ ಜಯಶ್ರೀ ಸಾಂಗ್ಲಿ ಯವರಿಗೆ ಕೃತಜ್ಞತೆ ಸಲ್ಲಿಸಿದರು.

Related posts

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya
error: Content is protected !!