25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಕಲ್ಲೇರಿ :ತೋಟಗಾರಿಕೆ ಇಲಾಖೆ ಜಿ. ಪಂ ಬೆಳ್ತಂಗಡಿ, ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪೆನಿ(ನಿ)ಕಲ್ಲೇರಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ. 30ರಂದು ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪನಿ(ನಿ)ಸಭಾಭವನ, ಕಲ್ಲೇರಿಯಲ್ಲಿ ಜರಗಿತು.


ಗ್ರಾ.ಪಂ. ತಣ್ಣೀರುವಂತ ಅಧ್ಯಕ್ಷೆ ಹೇಮಾವತಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಮಂಗಳೂರು ತೋಟಗಾರಿಕೆ ಉಪನಿರ್ದೇಶಕರು ಮಂಜುನಾಥ್, ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿ(ನಿ) ಕಚೇರಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಿಯಾ ಹಾಗೂ ಸದಸ್ಯರು ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿಯ ನಿರ್ದೇಶಕರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಭವಿಷ್ಯ ವಿಜ್ಞಾನಿಗಳು ಸಿ. ಪಿ. ಸಿ. ಆರ್. ವಿಟ್ಲ., ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿ
ಚಂದ್ರಶೇಖರ್, ತೋಟಗಾರಿಕಾ ಅಧಿಕಾರಿ ಕೊಕ್ಕಡ ಹೋಬಳಿ ಮಲ್ಲಿಕಾನಾಥ್ ಬಿರಾದಾರ್, ಸಹಾಯಕ ತೋಟಗಾರಿಕಾ ನಿರ್ದೇಶಕ ಮಹಾವೀರ ಶೇಕ್ ನವರ್ ಮಾಹಿತಿ ನೀಡಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!