26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಕಲ್ಲೇರಿ :ತೋಟಗಾರಿಕೆ ಇಲಾಖೆ ಜಿ. ಪಂ ಬೆಳ್ತಂಗಡಿ, ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪೆನಿ(ನಿ)ಕಲ್ಲೇರಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ. 30ರಂದು ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪನಿ(ನಿ)ಸಭಾಭವನ, ಕಲ್ಲೇರಿಯಲ್ಲಿ ಜರಗಿತು.


ಗ್ರಾ.ಪಂ. ತಣ್ಣೀರುವಂತ ಅಧ್ಯಕ್ಷೆ ಹೇಮಾವತಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಮಂಗಳೂರು ತೋಟಗಾರಿಕೆ ಉಪನಿರ್ದೇಶಕರು ಮಂಜುನಾಥ್, ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿ(ನಿ) ಕಚೇರಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಿಯಾ ಹಾಗೂ ಸದಸ್ಯರು ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿಯ ನಿರ್ದೇಶಕರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಭವಿಷ್ಯ ವಿಜ್ಞಾನಿಗಳು ಸಿ. ಪಿ. ಸಿ. ಆರ್. ವಿಟ್ಲ., ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿ
ಚಂದ್ರಶೇಖರ್, ತೋಟಗಾರಿಕಾ ಅಧಿಕಾರಿ ಕೊಕ್ಕಡ ಹೋಬಳಿ ಮಲ್ಲಿಕಾನಾಥ್ ಬಿರಾದಾರ್, ಸಹಾಯಕ ತೋಟಗಾರಿಕಾ ನಿರ್ದೇಶಕ ಮಹಾವೀರ ಶೇಕ್ ನವರ್ ಮಾಹಿತಿ ನೀಡಿದರು.

Related posts

ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

Suddi Udaya

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya
error: Content is protected !!