April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ನ.30ರಂದು ಇಲ್ಲಿಯ ಅಮೃತವರ್ಷಿಣಿ ಸಭಾ ಭವನದಲ್ಲಿ ಆರಂಭಗೊಂಡ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನವನ್ನು ಶ್ರೀ ಕ್ಷೇತ್ರೆ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತಿಯಲ್ಲಿ ಶತಾವಧಾನಿ ಡಾ.ರಾ.ಗಣೇಶ ಬಹುಶ್ರುತ ವಿದ್ವಾಂಸರು ಬೆಂಗಳೂರು ದೀಪ ಬೆಳಗಿಸಿ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಡಾ. ಪಾದೇಕಲ್ಲು ವಿಷ್ಟುಭಟ್ಟ ಲೇಖಕರು, ಸಂಶೋಧಕರು ನಿವೃತ್ತ ಪ್ರಾಂಶುಪಾಲರು ಉಡುಪಿ ವಹಿಸಿಕೊಂಡಿದ್ದಾರೆ.
ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಪ್ರಮೀಳಾ ಮಾಧವ ಬೆಂಗಳೂರು ಅವರು ‘ಸ್ತ್ರೀಯರ ಸ್ವಂತ ಸುಖಕ್ಕೆ ಸಾಹಿತ್ಯದ ಅರಿವಿನ ಅವಶ್ಯಕತೆ’ ಎಂಬ ವಿಷಯದಲ್ಲಿ,
ಪ್ರಾಧ್ಯಾಪಕರು ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ಡಾ. ಬಿ.ವಿ ವಸಂತ ಕುಮಾರ್ ಮೈಸೂರು
ಅವರು ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವ ಮಾಗೋ೯ಪಾಯಗಳು’ ಎಂಬ ವಿಷಯದಲ್ಲಿ ಹಾಗೂ
ಜಿಎಸ್‌ಎಸ್ ಮಹಾವಿದ್ಯಾಪೀಠದ ನಿರ್ದೇಶಕರಾದ ಪ್ರಕಟಣ ವಿಭಾಗದ ಪ್ರೊ. ಮೊರಬದ ಮಲ್ಲಿಕಾರ್ಜುನ ಅವರು ‘ಇಂದಿನ ತಾಂತ್ರಿಕ ಯುಗದಲ್ಲಿ ಸಾಹಿತ್ಯದ ಅವಶ್ಯಕತೆ ಮತ್ತು ಸಾಹಿತ್ಯವನ್ನು ಜನಪ್ರಿಯಗೊಳಿಸುವ ಮಾಗೋ೯ಪಾಯಗಳು’
ವಿಷಯದ ಬಗ್ಗೆ ಉಪನ್ಯಾಸ ನೀಡಿದರು.


ಶ್ರೀ ಮತಿ ಸೋನಿಯಾ ಯಶೋವರ್ಮ ಅವರ ಗುಣ ಗಣಿ-ಗುಣರತ್ನ ಪುಸ್ತಕ ಹಾಗೂ ಪುಷ್ಫದಂತ ಅವರ ಉಪರತ್ನಗಳು ಹಾಗೂ ನವರತ್ನಗಳು ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳು ಉಜಿರೆಯ ವಿದ್ಯಾರ್ಥಿಗಳ ಪ್ರಾಥ೯ನೆ ಬಳಿಕ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸ್ವಾಗತಿಸಿದರು. ಎಸ್.ಡಿ.ಎಂ ಸೊಸೈಟಿ ಉಜಿರೆ ನಿರ್ದೇಶಕ (ಯೋಜನೆ) ಡಿ.ಶ್ರೇಯಸ್ ಕುಮಾರ್, ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳು ಉಜಿರೆಯ ಕಾಯ೯ದಶಿ೯ ಡಾ.ಸತೀಶ್ಚಂದ್ರ ಎಸ್ ಸನ್ಮಾನ ಪತ್ರ ವಾಚಿಸಿದರು. ಸ್ವಾಗತ ಸಮಿತಿ ಖಜಾಂಚಿ ಡಿ. ಹಷೇಂದ್ರ ಕುಮಾರ್ ಉಪನ್ಯಾಸಕರನ್ನು ಸನ್ಮಾನಿಸಿದರು.ಉಜಿರೆ ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಅಶೋಕ್ ಕುಮಾರ್ ಧನ್ಯವಾದವಿತ್ತರು .ಉಜಿರೆ ಎಸ್.ಡಿ.ಎಂ. ಕಾಲೇಜು ಉಪನ್ಯಾಸಕ ಡಾ.ದಿವಾ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.
ರಾಜೇಶ್ ಕೃಷ್ಣನ್ ಮತ್ತು ತಂಡ ಬೆಂಗಳೂರು ಇವರಿಂದ ‘ಸಂಗೀತ ಸಂಜೆ’ ಕಾರ್ಯಕ್ರಮ ನಡೆಯಿತು. ರಾತ್ರಿ ಗೌರಿಮಾರುಕಟ್ಟೆ ಉತ್ಸವ ನಡೆಯಿತು.

Related posts

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya
error: Content is protected !!