33 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya
error: Content is protected !!