30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya
error: Content is protected !!