July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!