ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಜೀವಿತಾವಧಿಯಲ್ಲಿ ಹೇಗೆ ಬದುಕಿದ್ದಾನೆ ಎಂಬುದು ಬಹಳ ಮುಖ್ಯ: ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ – ತಾ.ಪಂ ವಿಶ್ರಾಂತ ಅಧೀಕ್ಷಕ‌ ಪ್ರಶಾಂತ್ ಬಳಂಜ ಅವರಿಂದ ವಿಶಿಷ್ಟ ರೀತಿಯ ಕೃತಜ್ಞತಾ ಕಾರ್ಯಕ್ರಮ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya
error: Content is protected !!