27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!