38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya
error: Content is protected !!