25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya
error: Content is protected !!