July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!