23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!