24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya
error: Content is protected !!