ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!