25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya
error: Content is protected !!