July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ.

ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು ಗೋಚರಿಸುತ್ತದೆ ಗೌರಿ ಅವರು ಕೇರೆ ಹಾವು ಎಂದು ಭಾವಿಸಿ ತನ್ನ ಮನೆಯ ಅಂಗಳದ ಸ್ವಚ್ಛತೆ ಯನ್ನು ಮುಗಿಸಿ ತಮ್ಮ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಮರುದಿನ ಡಿ.1 ರಂದು ಬೆಳಗ್ಗೆ 8 ಗಂಟೆಯ ಸಮಯದಲ್ಲಿ ನೋಡಿದರೂ ಹಾವು ಅದೇ ಸ್ಥಳದಲ್ಲಿರುವುದನ್ನು ಕಂಡು ಭಯಭೀತರಾಗಿ ತನ್ನ ಮನೆ ಯಲ್ಲಿ ಹಾಗೂ ನೆರೆ ಹೊರೆಯ ಮನೆಯವರಲ್ಲಿ ಮಾಹಿತಿ ನೀಡಿದರು, ಗಮನಿಸಿದಾಗ ಕಾಳಿಂಗ ಸರ್ಪವೆಂದು ತಿಳಿದು, ತಕ್ಷಣವೇ ಉಪ್ಪಿನಂಗಡಿಯ ನಿವಾಸಿಯಾದ ಸ್ನೇಕ್ ಝಕಾರಿಯ ಇವರನ್ನು ಸಂಪರ್ಕಿಸಲಾಯಿತು ತಕ್ಷಣ ಅವರು ಸ್ಥಳಕ್ಕೆ ಧಾವಿಸಿ ಜಾಣ್ಮೆಯಿಂದ ಹಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆದು ಪೆರಿಯಶಾಂತಿ ಬಳಿ ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ.

ಸ್ನೇಕ್ ಝಕಾರಿಯ ಅವರ ಹೇಳಿಕೆಯ ಪ್ರಕಾರ ಈ ಹಾವು ಸುಮಾರು 9 ಅಡಿ ಉದ್ದವಿದ್ದು ಅಂದಾಜು ಒಂದುವರೆ ವರುಷದ ಹಾವು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು ಸಹಕರಿಸಿದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya
error: Content is protected !!