September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾಟ ಆಯೋಜಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ದೃಷಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ ಮಾಡಲಾಯಿತು. ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ ಹಾಗೂ ಟ್ರಸ್ಟ್ ಸದಸ್ಯರು ಮೊತ್ತ ಸ್ವೀಕರಿಸಿದರು.

ಕಳೆದ ಒಂದು ವಾರದ ಹಿಂದೆ ಲತೇಶ್ ಪೆರಾಜೆ ಹಾಗೂ ಪ್ರಣಾಮ್ ಶೆಟ್ಟಿ ನೇತೃತ್ವದಲ್ಲಿ ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ನಿಶಾಂತ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಮಾರು ರೂ 61 ಸಾವಿರ ಮೊತ್ತ ಉಳಿಕೆಯಾಗಿತ್ತು. ಅದರಲ್ಲಿ ರೂ.31 ಸಾವಿರ ಬಳಂಜ ಶಾಲೆಗೆ ಹಾಗೂ ಉಳಿಕೆ ಮೊತ್ತವನ್ನು ಅಶಕ್ತ ಕುಟುಂಬಗಳಿಗೆ ಹಸ್ತಾಂತರಿಸಿ ಗ್ರಾಮಸ್ಥರ ಪ್ರೀತಿಗೆ ಪಾತ್ರರಾದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಮುಖ್ಯೋಪಾಧ್ಯರು, ಶಿಕ್ಷಕರು, ಅಟ್ಲಾಜೆ ಕ್ರಿಕೆಟರ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
error: Content is protected !!