July 23, 2026
ಪ್ರಮುಖ ಸುದ್ದಿ

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ಡಿ.2 ರಿಂದ ಡಿ. 8 ತನಕ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್‌ ಘೋಷಿಸಿದ್ದಾರೆ.

ನಾಳೆ ಡಿಸೆಂಬ‌ರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ.
ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ. ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪಿಯುಸಿ ತನಕ
ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಜೆ ಘೋಷಿಸಿದ್ದಾರೆ.

Related posts

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya
error: Content is protected !!