July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ತೆಂಕಕಾರಂದೂರು :ಇಲ್ಲಿಯ ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಮಕ್ಕಳು ಹಾಗು ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಪಂಚಾಯತ್ ಸದಸ್ಯೆ ಪದ್ಮಾವತಿ ವಹಿಸಿದ್ದರು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಕಳೆದ ಬಾರಿ ಶಾಲೆಗೆ ಸೇರಿದ ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಯಿತು. ಬಳಿಕ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿಯವರು ಮಾತನಾಡಿ ಬಾಲ್ಯದಲ್ಲಿಯೆ “ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳಿಸಿ ಮಕ್ಕಳನ್ನು ಸತ್ ಪ್ರಜೆಗಳನ್ನಾಗಿ ಮಾಡಿ” ಮಕ್ಕಳ ಮೊಬೈಲ್ ಬಳಕೆಯನ್ನು ಕಮ್ಮಿ ಮಾಡಿ ಉತ್ತಮ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಪೋಷಕರ ಕರ್ತವ್ಯ ಎಂದು ಹೇಳಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷೆ ಶೋಭ ಕುಲಾಲ್, ಪಂಚಾಯತ್ ಸದಸ್ಯರಾದ ಹೇಮಂತ್, ಮುಖ್ಯ ಅಥಿತಿಗಳಾದ ಅನಿಲ್ ಕುಮಾರ್ ಮಾಳಿಗೆ ಮನೆ, ರಾಮಚಂದ್ರ ರಾವ್ ಅಮಣ ಬೈಲು, ವಿಶ್ವನಾಥ ಲಿಂಗಾಯಿತ, ಚಂದ್ರ ಪೂಜಾರಿ, ಅಬ್ದುಲ್ ಖಾದರ್ ಕರಂಬಾರು, ಬಾಲವಿಕಾಸ ಸಮಿತಿ ಅಧ್ಯಕ್ಷೆ ವೇದಾವತಿ, ಸಲಹಾ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಉಪಸ್ಥಿತರಿದ್ದರು.

ಈ ಸಂದರ್ಭ ಚಾರ್ವಿ ಮಗುವಿನ ಹೆಸರಲ್ಲಿ ಪೋಷಕರು, ಹತ್ತು ಕುರ್ಚಿಗಳನ್ನು ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ತಾಯಂದಿರು, ಹಳೆ ವಿದ್ಯಾರ್ಥಿಗಳು, ಊರವರು, ಸ್ವಚ್ಛತಾ ಸೇನಾನಿಗಳಾದ ಭಾರತಿ ಮತ್ತು ಸುಮಲತಾ, ಸ್ತ್ರೀ ಶಕ್ತಿ, ಸಂಜೀವಿನಿ, ಸ್ವಸಹಾಯ ಸಂಘದವರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು. ಸಹಾಯಕಿ ಸುನಂದ, ಉಷಾ ಬಿ, ಶಶಿಕುಮಾರಿ, ಸೋನಾ ಆಗಸ್ತಿನ್, ಅರುಣ ಮೆಹೆಂದಳೆ, ಉಷಾ ವಿ, ಶ್ರುತಿ ಎ ಸಹಕರಿಸಿದರು.

Related posts

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya
error: Content is protected !!