September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

ಬಂದಾರು : ಡಿ.2.ರಂದು ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ ನಡೆಯಿತು.

ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ ಅಧ್ಯಕ್ಷತೆ ವಹಿಸಿದರು.
ಬಾಲಕೃಷ್ಣ ಪೂಜಾರಿ ಬಜಗುತ್ತು ಕೊಯ್ಯೂರು ಮಾತನಾಡುತ್ತಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ವಿವಿಧ ವಿಭಾಗದ ಸಮಿತಿ ಪದಾಧಿಕಾರಿಗಳು, ಸ್ವಯಂ ಸೇವಕರು ಮನಃಪೂರ್ವಕವಾಗಿ ತೊಡಗಿಸಿಕೊಂಡು ತಮ್ಮ ಕರ್ತವ್ಯವನ್ನು ಸೇವೆ ಎಂದು ತಿಳಿದು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.


ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಅವರು ಮಾರ್ಗದರ್ಶನ ನೀಡಿ ಅರಿಕೋಡಿ ಶ್ರೀ ಕ್ಷೇತ್ರದ ಮೂಲಕ ಬ್ರಹ್ಮ ಕಲಶೋತ್ಸವ ಪುಣ್ಯ ಕಾರ್ಯಕ್ರಮಕ್ಕೆ ಸಂಪೂರ್ಣವಾಗಿ ಸಹಕಾರ ನೀಡುವುದಾಗಿ ಹೇಳಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ, ಅಭಿವೃದ್ಧಿ ಸಮಿತಿ, ಬ್ರಹ್ಮ ಕಲಶೋತ್ಸವ ಸಮಿತಿ, ಮಹಿಳಾ ಸಮಿತಿ ಹಾಗೂ ವಿವಿಧ ಸಮಿತಿ ಸಂಚಾಲಕ-ಸಹಸಂಚಾಲಕರು ಉಪಸ್ಥಿತರಿದ್ದರು.


ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅನುವಂಶಿಕ ಮೊಕ್ತೇಸರು ಕುಕ್ಕುಪ್ಪ ಗೌಡ, ತಿಮ್ಮಪ್ಪ ಗೌಡ ಸೋಣಕುಮೇರು ,ಅಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.

Related posts

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!