32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿ ಹಾಗೂ ಎಸ್ ಎಸ್ ಎಫ್ ಲಾಯಿಲ ಶಾಖೆಯ ಪ್ರತಿಭೆ ಸಯ್ಯದ್ ಮುಹಮ್ಮದ್ ಉವೈಸ್ ಇವರು ಎಸ್ ಎಸ್ ಎಫ್ ಇಂಡಿಯಾ ವತಿಯಿಂದ ಗೋವಾ ರಾಜ್ಯದ ವೆರ್ನದಲ್ಲಿ ನ . 29, 30, ಮತ್ತು ಡಿ. 1 ರಂದು ನಡೆಸಿದ “ರಾಷ್ಟ್ರಮಟ್ಟದ ಸಾಹಿತ್ಯೋತ್ಸವ -24 ” ಇದರ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಸುಮಾರು 26 ರಾಜ್ಯಗಳಿಂದ ಭಾಗವಹಿಸಿದ್ದ ಸ್ಪರ್ದಾಳುಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಕರ್ನಾಟಕ ರಾಜ್ಯಕ್ಕೆ, ಶಾಲೆಗೆ ಹಾಗೂ ಹೆತ್ತವರಿಗೆ ಗೌರವವನ್ನು ತಂದುಕೊಟ್ಟಿದ್ದಾರೆ. ಉವೈಸ್ ಇವರು 2023-24ನೇ ಸಾಲಿನಲ್ಲಿ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದು ಸತತ ಎರಡನೇ ಬಾರಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಉವೈಸ್ ಸ್ಟಾರ್ ಲೈನ್ ವಿದ್ಯಾಸಂಸ್ಥೆಯ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸೈಯದ್ ಮುಹಮ್ಮದ್ ಅಯ್ಯುಬ್ ಹಾಗೂ ಶ್ರೀಮತಿ ನೂರ್ ಶಬ ದಂಪತಿಯ ಪುತ್ರರಾಗಿರುತ್ತಾರೆ.

Related posts

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!