23.3 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ಡಿ.2 ರಿಂದ ಡಿ. 8 ತನಕ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್‌ ಘೋಷಿಸಿದ್ದಾರೆ.

ನಾಳೆ ಡಿಸೆಂಬ‌ರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ.
ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ. ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪಿಯುಸಿ ತನಕ
ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಜೆ ಘೋಷಿಸಿದ್ದಾರೆ.

Related posts

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya
error: Content is protected !!