September 6, 2026
ಪ್ರಮುಖ ಸುದ್ದಿ

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ಡಿ.2 ರಿಂದ ಡಿ. 8 ತನಕ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್‌ ಘೋಷಿಸಿದ್ದಾರೆ.

ನಾಳೆ ಡಿಸೆಂಬ‌ರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ.
ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ. ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪಿಯುಸಿ ತನಕ
ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಜೆ ಘೋಷಿಸಿದ್ದಾರೆ.

Related posts

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!