23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ಡಿ.2 ರಿಂದ ಡಿ. 8 ತನಕ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್‌ ಘೋಷಿಸಿದ್ದಾರೆ.

ನಾಳೆ ಡಿಸೆಂಬ‌ರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ.
ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ. ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪಿಯುಸಿ ತನಕ
ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಜೆ ಘೋಷಿಸಿದ್ದಾರೆ.

Related posts

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!