22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

ಬಂದಾರು : ಡಿ.2.ರಂದು ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ ನಡೆಯಿತು.

ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ ಅಧ್ಯಕ್ಷತೆ ವಹಿಸಿದರು.
ಬಾಲಕೃಷ್ಣ ಪೂಜಾರಿ ಬಜಗುತ್ತು ಕೊಯ್ಯೂರು ಮಾತನಾಡುತ್ತಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ವಿವಿಧ ವಿಭಾಗದ ಸಮಿತಿ ಪದಾಧಿಕಾರಿಗಳು, ಸ್ವಯಂ ಸೇವಕರು ಮನಃಪೂರ್ವಕವಾಗಿ ತೊಡಗಿಸಿಕೊಂಡು ತಮ್ಮ ಕರ್ತವ್ಯವನ್ನು ಸೇವೆ ಎಂದು ತಿಳಿದು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.


ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಅವರು ಮಾರ್ಗದರ್ಶನ ನೀಡಿ ಅರಿಕೋಡಿ ಶ್ರೀ ಕ್ಷೇತ್ರದ ಮೂಲಕ ಬ್ರಹ್ಮ ಕಲಶೋತ್ಸವ ಪುಣ್ಯ ಕಾರ್ಯಕ್ರಮಕ್ಕೆ ಸಂಪೂರ್ಣವಾಗಿ ಸಹಕಾರ ನೀಡುವುದಾಗಿ ಹೇಳಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ, ಅಭಿವೃದ್ಧಿ ಸಮಿತಿ, ಬ್ರಹ್ಮ ಕಲಶೋತ್ಸವ ಸಮಿತಿ, ಮಹಿಳಾ ಸಮಿತಿ ಹಾಗೂ ವಿವಿಧ ಸಮಿತಿ ಸಂಚಾಲಕ-ಸಹಸಂಚಾಲಕರು ಉಪಸ್ಥಿತರಿದ್ದರು.


ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅನುವಂಶಿಕ ಮೊಕ್ತೇಸರು ಕುಕ್ಕುಪ್ಪ ಗೌಡ, ತಿಮ್ಮಪ್ಪ ಗೌಡ ಸೋಣಕುಮೇರು ,ಅಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ , ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧ ಆಯ್ಕೆ

Suddi Udaya

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya
error: Content is protected !!