24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

ಬೆಳ್ತಂಗಡಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬಂಗಾಳ ಕೊಲ್ಲಿ ಸಮುದ್ರದಲ್ಲಿ “ಫೆಂಗಲ್” ಚಂಡಮಾರುತ ಉಂಟಾಗಿರುವ ಪರಿಣಾಮದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು ಡಿ.02 ರಿಂದ 03 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು, ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ, ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಹಾಗೂ ಮುಂಜಾಗ್ರಹತೆ ವಹಿಸುವಂತೆ ಇಲಾಖೆ ತಿಳಿಸಿದೆ.

Related posts

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!